ಬೆಂಗಳೂರು: ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಾವು ಯಾವ ಕಾರಣದಿಂದ ರಾಜೀನಾಮೆ ಸಲ್ಲಿಸಿದ್ದೇನೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ರಾಜೀನಾಮೆ ಹಿನ್ನೆಲೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ತಾವು ಅತೃಪ್ತ ಶಾಸಕರ ಗುಂಪಿನಲ್ಲಿ ಇಲ್ಲ. ಒಬ್ಬಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ಶಾಸಕ ಮುನಿರತ್ನಂ ಮಾತನಾಡಿ, ಶಾಸಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದು, ಅದನ್ನು ಹಿಂಪಡೆಯುವ ಮಾತೇ ಇಲ್ಲ. ರಾಜೀನಾಮೆ ವಿಚಾರವಾಗಿ ಏನೇ ಹೇಳಬೇಕಿದ್ದರೂ ಆ ಬಗ್ಗೆ ನಮ್ಮ ನಾಯಕರಾದ ರಾಮಲಿಂಗಾರೆಡ್ಡಿ ಹೇಳುತ್ತಾರೆ ಎಂದರು.