ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಹಾಗೂ ಅವರ ಕುಟುಂಬ ರಾಜಕಾರಣದಿಂದ ತಾವು ಸಾಕಷ್ಟು ನೋವು ಅನುಭವಿಸಿದ್ದು, ತಮ್ಮಂತೆಯೇ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿವರೂ ನೋವನ್ನು ಅನುಭವಿಸುತ್ತಿದ್ದಾರೆ. ದೇವೇಗೌಡರ ಕುಟುಂಬದ ಕಿರುಕುಳ ತಡೆಯಲು ಪಕ್ಷದಲ್ಲಿ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಶಾಸಕರ ಜೊತೆ ಪಕ್ಷದ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವುದು ಖಚಿತ ಎಂದು ಭವಿಷ್ಯ ನುಡಿದರು