ಹಿರಿಯ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದಾಗ, ರಾಮಲಿಂಗಾ ರೆಡ್ಡಿಯವರು ಹಿರಿಯ ನಾಯಕರು, ಕಾಂಗ್ರೆಸ್ ನಾಯಕ, ಬೆಂಗಳೂರಿನಲ್ಲಿ ಸುದೀರ್ಘ ವರ್ಷಗಳಿಂದ ಕಾಂಗ್ರೆಸ್ ನ ಕೋಟೆಯನ್ನು ಹಿಡಿದಿಟ್ಟುಕೊಂಡಿದ್ದಾರೆ. ಅವರ ಬೇಡಿಕೆಗಳೇನು, ಸಮಸ್ಯೆಗಳೇನು ಎಂದು ತಿಳಿದುಕೊಂಡು ಅದಕ್ಕೆ ನಾವೇನು ಮಾಡಬಹುದು ಎಂದು ನೋಡೋಣ ಎಂದು ಹೇಳಿದರು.