ಕರ್ನಾಟಕ ರಾಜಕೀಯ ಬಿಕ್ಕಟ್ಟು ಮಳೆ ಇದ್ದಂತೆ: ಬರುತ್ತೇ, ಹೋಗುತ್ತೆ- ಮಹೇಂದ್ರ ಸಿಂಘಿ

ಕರ್ನಾಟಕದ ರಾಜಕೀಯ ಬಿಕ್ಕಟ್ಟು ಕುಟುಂಬದ ವಿಚಾರವಾಗಿದ್ದು, ಮಳೆ ಇದ್ದಂತೆ ಬರುತ್ತೇ ಹೋಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಹೇಳಿದ್ದಾರೆ.
ಮಹೇಂದ್ರ ಸಿಂಘಿ
ಮಹೇಂದ್ರ ಸಿಂಘಿ
ಮುಂಬೈ: ಕರ್ನಾಟಕದ  ರಾಜಕೀಯ ಬಿಕ್ಕಟ್ಟು ಕುಟುಂಬದ ವಿಚಾರವಾಗಿದ್ದು, ಮಳೆ ಇದ್ದಂತೆ ಬರುತ್ತೇ ಹೋಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಮಹೇಂದ್ರ ಸಿಂಘಿ ಹೇಳಿದ್ದಾರೆ.
ಸೋಫಿಟೆಲ್ ಹೋಟೆಲ್ ನಲ್ಲಿ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಂದ್ರ ಸಿಂಘಿ, 13 ತಿಂಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ -ಜೆಡಿಎಸ್  ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದರು. 
ಅತೃಪ್ತರನ್ನು ಭೇಟಿ ಮಾಡುವುದು ತಮ್ಮ ಕರ್ತವ್ಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದೇನೆ. ರಮೇಶ್ ಜಾರಕಿಹೊಳಿ ಅವರನ್ನು ಮಾತ್ರ ಭೇಟಿಯಾಗಿದ್ದೇನೆ. ಉಳಿದ ಯಾವುದೇ ಶಾಸಕರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಪಪಡಿಸಿದರು.
ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಮಳೆ ಬಂದಂತೆ  ಬರುತ್ತೇ ಹೋಗುತ್ತದೆ. ಅತೃಪ್ತರ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ ಎಂದು ಮಹೇಂದ್ರ ಸಿಂಘಿ ಹೇಳಿದರು.
ಬಿಜೆಪಿ ಉಪಾಧ್ಯಕ್ಷ ಪ್ರಸಾದ್ ಲಾಡ್ ಕೂಡಾ ಸೋಫಿಟೆಲ್ ಹೋಟೆಲ್ ಹೊರಗಡೆ ಕಾಣಿಸಿಕೊಂಡಿದ್ದಾರೆ.  ಶಾಸಕ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿರುವ 10ಕ್ಕೂ ಹೆಚ್ಚು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಮುಂಬೈಯ ಪ್ರತಿಷ್ಠಿತ ಸೋಫಿಟೆಲ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com