ಕಾಂಗ್ರೆಸ್ ಪಕ್ಷದಲ್ಲಿ ಮೊದಲಿನಿಂದಲೂ ಸಿದ್ದರಾಮಯ್ಯ, ಪರಮೇಶ್ವರ್ ಬಣಗಳಿದ್ದು, ಅನೇಕ ವಿಚಾರಗಳಲ್ಲಿ ಎರಡು ಗುಂಪಿನ ನಡುವೆ ಕಿತ್ತಾಟ ನಡೆದುಕೊಂಡೆ ಬಂದಿದೆ. ಈಗ ರಾಜೀನಾಮೆ ನೀಡಿರುವ ಶಾಸಕರ ಪೈಕಿ ಸಿದ್ದರಾಮಯ್ಯ ಆಪ್ತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.