ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಚಿವ ಡಿ ಕೆ ಶಿವಕುಮಾರ್ ಅವರು ತಮ್ಮೊಂದಿಗೆ ಮಾತುಕತೆ ನಡೆಸಿದ್ದಾರೆ, ಇದರಲ್ಲಿ ಯಾವುದೇ ತಪ್ಪಿಲ್ಲ, ಅವರೊಂದಿಗೆ ನಡೆದ ಮಾತುಕತೆಯನ್ನು ಮಾಧ್ಯಮಗಳಲ್ಲಿ ಬಹಿರಂಗ ಪಡಿಸುವ ಅಗತ್ಯವಿಲ್ಲ ಎಂದು ಹೇಳಿದರು