ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ ಶಾಸಕ, ಸಚಿವ!

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮತ್ತೋರ್ವ ಶಾಸಕ ರಾಜೀನಾಮೆ ನೀಡಿದ್ದು, ಅತೃಪ್ತ ಶಾಸಕರ ಸಂಖ್ಯೆಗೆ ಮತ್ತೊಂದು ಸೇರ್ಪಡೆಯಾಗಿದೆ.
ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ ಶಾಸಕ, ಸಚಿವ!
ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ ಶಾಸಕ, ಸಚಿವ!
ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮತ್ತೋರ್ವ ಶಾಸಕ ರಾಜೀನಾಮೆ ನೀಡಿದ್ದು, ಅತೃಪ್ತ ಶಾಸಕರ ಸಂಖ್ಯೆಗೆ ಮತ್ತೊಂದು ಸೇರ್ಪಡೆಯಾಗಿದೆ. 
ಪಕ್ಷೇತರ ಶಾಸಕ ಆರ್ ಶಂಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಪಕ್ಷೇತರ ಶಾಸಕ ನಾಗೇಶ್ ರಾಜೀನಾಮೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 
13 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರದ ಶಾಸಕರ ಸಂಖ್ಯಾಬಲ 106 ಕ್ಕೆ ಕುಸಿದಿದ್ದು ಕುಮಾರಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇನ್ನು ಇದೇ ವೇಳೆ ಅತೃಪ್ತ ಶಾಸಕರ ಮನವೊಲಿಕೆಗಾಗಿ ಸರ್ಕಾರದ ಮಂತ್ರಿಮಂಡಲ ಸಾಮೂಹಿಕ ರಾಜೀನಾಮೆ ನೀಡಿದ್ದು, ಸರ್ಕಾರ ಉಳಿಸಿಕೊಳ್ಳುವುದಕ್ಕೆ ಸಚಿವ ಸಂಪುಟ ಪುನಾರಚನೆಯಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com