"ಬಿಜೆಪಿಯ ರಾಜ್ಯ ನಾಯಕರಷ್ಟೇ ಅಲ್ಲದೇ ಮೋದಿ, ಶಾ ಸರ್ಕಾರ ಅಸ್ಥಿರಗೊಳಿಸುವುದಕ್ಕೆ ಯತ್ನಿಸುತ್ತಲೇ ಇದ್ದಾರೆ, ಇದು ಅವರ 6 ನೇ ಪ್ರಯತ್ನವಾಗಿದೆ, ಶಾಸಕರಿಗೆ ಮಂತ್ರಿಗಿರಿ, ಹಣದ ಆಮಿಷವೊಡ್ಡಲಾಗುತ್ತಿದೆ. ಹಣದ ಆಮಿಷವೊಡ್ಡುವುದಕ್ಕೆ ಅವರಿಗೆ ಅಷ್ಟೊಂದು ಹಣ ಎಲ್ಲಿಂದ ಬರುತ್ತೆ ಅಂತ ಕೇಳುತ್ತಲೇ ಇದ್ದೀವಿ. ಇನ್ನು ಬಂಡಾಯವೆದ್ದಿರುವ ನಮ್ಮ ಶಾಸಕರಿಗೆ ಕಾನೂನಿನ ಅರಿವಿದ್ಯಾ? ಬಂಡಾಯವೆದ್ದಿರುವ ಶಾಸಕರು ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದಾರೆ, ಆಮಿಷಕ್ಕೆ ಒಳಗಾಗಿ ಸೂಕ್ತ ಕಾರಣ ಇಲ್ಲದೇ ರಾಜೀನಾಮೆ ನೀಡಿದರೆ ಅವರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಬಹುದಾಗಿದೆ. ಅನರ್ಹಗೊಂಡರೆ 6 ವರ್ಷ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡುತ್ತೇವೆ" ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.