ಸಿಎಲ್ ಪಿ ಸಭೆಗೆ 10 ಶಾಸಕರ ಚಕ್ಕರ್: ದೋಸ್ತಿ ಕಡಿದುಕೊಳ್ಳಲು ಕೈ ಶಾಸಕರ ಒತ್ತಾಯ?

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ 57 ಶಾಸಕರು ಹಾಜರಾಗಿದ್ದು, ಹಲವು ಶಾಸಕರು ಗೈರು ಹಾಜರಾಗಿರುವುದು ಇದೀಗ ..
ಕಾಂಗ್ರೆಸ್ ಶಾಸಕಾಂಗ ಸಭೆ
ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು: ಮಾಜಿ ಸಿಎಂ  ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ಕಾಂಗ್ರೆಸ್ ಶಾಸಕಾಂಗ ಸಭೆಗೆ 57 ಶಾಸಕರು ಹಾಜರಾಗಿದ್ದು, ಹಲವು ಶಾಸಕರು ಗೈರು ಹಾಜರಾಗಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಒಟ್ಟು ಎಂಟು ಮಂದಿ ಶಾಸಕರು ಗೈರು ಹಾಜರಾಗಿದ್ದು, ಇದರಲ್ಲಿ ಆರು ಮಂದಿ ಶಾಸಕರು ಗೈರು ಹಾಜರಿಗೆ ಕಾರಣ ನೀಡಿದ್ದಾರೆ ಎಂದು ವರದಿ ತಿಳಿಸಿದೆ. 
ಸಂಡೂರು ಶಾಸಕ ಇ.ತುಕಾರಾಂ, ಶ್ಯಾಮನೂರು ಶಿವಶಂಕರಪ್ಪ, ಅಂಜಲಿ ನಿಂಬಾಳ್ಕರ್, ಡಾ.ಸುಧಾಕರ್, ಎಂಟಿಬಿ ನಾಗರಾಜ್, ರಾಜೇಗೌಡ, ಖನಿಜಾ ಫಾತಿಮಾ, ರೋಷನ್ ಬೇಗ್ ಸಭೆಗೆ ಗೈರಾಗಿದ್ದಾರೆ.
ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ಬಳ್ಳಾರಿ ಗ್ರಾಮೀಣದ ನಾಗೇಂದ್ರ, ಭದ್ರಾವತಿ ಶಾಸಕ ಸಂಗಮೇಶ್ ಕೂಡಾ ಸಭೆಗೆ ಗೈರಾಗಿದ್ದರು. ಇನ್ನೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದವರು  ಬರಲಿಲ್ಲ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗದ್ದಲ ಉಂಟಾಗಿ ಜೆಡಿಎಸ್ ಜೊತೆಗಿನ ಮೈತ್ರಿ ಕಡೆದುಕೊಂಡು ಪ್ರತಿಪಕ್ಷ ಸ್ಥಾನದಲ್ಲಿ ಕೂರುವಂತೆ ಶಾಸಕರು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com