ರಾಜೀನಾಮೆ ಪ್ರಶ್ನೆಯೇ ಇಲ್ಲ- ಮೈತ್ರಿ ಸರ್ಕಾರ ಬೆಂಬಲಿಸುತ್ತೇನೆ- ಎನ್. ಮಹೇಶ್

ಕೊಳ್ಳೇಗಾಲದ ಬಿಎಸ್ಪಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹೇಶ್, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕೊಳ್ಳೇಗಾಲದ ಬಿಎಸ್ಪಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹೇಶ್, ನಾನು  ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಾನು ಮೈತ್ರಿ ಸರ್ಕಾರವನ್ನು ಬೆಂಬಲಿಸುತ್ತೇನೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ .ಅಧಿವೇಶನದಲ್ಲಿ ಕೆಲ ವಿಷಯದ ಚರ್ಚೆ ಬಗ್ಗೆ ಮಾತನಾಡಲು ಬಂದಿದ್ದೆ ಎಂದು ಸ್ಪೀಕರ್ ಕಚೇರಿ ಬಳಿ ಮಾಹಿತಿ ನೀಡಿದ್ದಾರೆ.
ಅಲ್ಲದೇ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎನ್. ಮಹೇಶ್, ಮಧ್ಯಂತರ ಚುನಾವಣೆ ಅನಿವಾರ್ಯವಾದರೆ ಮತದಾನ ಮಾಡಬೇಡಿ. ವೋಟಿಂಗ್ ಡಬ್ಬ ಖಾಲಿ ಕಳುಹಿಸಲು ಮತದಾರರಿಗೆ ಕರೆ ನೀಡುವೆ. ಇಂತಹ ಪರಿಸ್ಥಿತಿ ಉಂಟಾಗಿದೆ ಎಂದರು.
ಕೆಲಕಾಲ ಶಿಕ್ಷಣ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಎನ್ . ಮಹೇಶ್  ಬಿಎಸ್ಪಿ ಪಕ್ಷದ ಅಧಿನಾಯಕಿ ಮಾಯಾವತಿ ಅವರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com