ಬೆಂಗಳೂರು: ಆಪ್ತ ಶಾಸಕರ ರಾಜೀನಾಮೆ ಬೆಳವಣಿಗೆಯಿಂದ ಆಕ್ರೋಶಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಿರುವ ಶಾಸಕ ಸುಧಾಕರ್ ನಮ್ಮ ಶಾಸಕ, ನಾವು ಚರ್ಚೆ ನಡೆಸಲು ಕರೆದುಕೊಂಡು ಹೋಗಿದ್ದೆವು, ಆದರೆ ಸುಧಾಕರ್ ಜೊತೆ ಮಾತನಾಡುವ ಯಾವ ನೈತಿಕತೆ ಬಿಜೆಪಿಯವರಿಗೆ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಶಾಸಕರಿಗೆ ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಹಣದ ಆಮಿಷವೊಡ್ಡುತ್ತಿದ್ದಾರೆ. ಇ.ಡಿ ಸಿಬಿಐ ನ ಬೆದರಿಕೆ ಹಾಕುತ್ತಿದ್ದಾರೆ, ಬಿಜೆಪಿಯವರು ಲಜ್ಜೆಗೆಟ್ಟವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ, ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.