ಈ ಹಿನ್ನಲೆಯಲ್ಲಿ ವಿಧಾನಸೌಧ ಆವರಣ ಪ್ರವೇಶಿಸಿದ ಅತೃಪ್ತ ಶಾಸಕರ ಪೈಕಿ ಭೈರತಿ ಬಸವರಾಜು ಓಡೋಡಿಕೊಂಡು ಬಂದು ಸ್ಪೀಕರ್ ಕಚೇರಿಗೆ ತಲುಪಿದರು. ನಂತರ ರಮೇಶ್ ಜಾರಕಿಹೊಳಿ, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಎಸ್ ಟಿ ಸೋಮಶೇಖರ್, ಹೆಚ್ ವಿಶ್ವನಾಥ್, ಮುನಿರತ್ನ, ಪ್ರತಾಪ್ ಗೌಡ ಪಾಟೀಲ್, ಕೆ, ಗೋಪಾಲಯ್ಯ, ನಾರಾಯಣ ಗೌಡ, ಮಹೇಶ್ ಕುಮಟಳ್ಳಿ ಕಚೇರಿಗೆ ತಲುಪಿದರು.