ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ ದೇವರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿಗೆ ಏನೂ ಮಾಡೋಕೆ ಆಗಲ್ಲ. ದೇವರು ಎಲ್ಲಿಯವರೆಗೆ ಅಧಿಕಾರ ಕೊಡುತ್ತಾನೆ ಅಲ್ಲಿಯವರೆಗೆ ನಾವು ಇರುತ್ತೇವೆ. ಸರ್ಕಾರ ಬಿದ್ದರೆ ಸಿಎಂ ಅವರಿಗೆ ನಷ್ಟ ಇಲ್ಲ. ಜನರಿಗೆ ನಷ್ಟ ಆಗೋದು, ಅಧಿಕಾರದಲ್ಲಿ ಇರುವವರೆಗೆ ಜನರ ಸಿಎಂ ಜನರ ಸೇವೆ ಮಾಡುತ್ತಾರೆ ಎಂದು ಹೇಳಿದರು.