ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ.
ಆಪರೇಷನ್ ಹಸ್ತದ ಭಯದಲ್ಲಿರುವ ಬಿಜೆಪಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ, ವಿಧಾನಸಭೆಯಲ್ಲಿ ಸಂತಾಪ ಸೂಚಿಸುತ್ತಿದ್ದ ವೇಳೆಯೇ ಸದನದಿಂದ ಎದ್ದು ಹೊರಟ ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಕೊಠಡಿಗೆ ತೆರಳಿ ಬಿಜೆಪಿ ಶಾಸಕರ ಜೊತೆ ಸಭೆ ನಡೆಸಿದರು.
ತಮ್ಮ ಶಾಸಕರು ಅಧಿವೇಶನ ಮುಗಿಯುವವರೆಗೂ ಬಿಜೆಪಿ ಶಾಸಕರು ಎಲ್ಲೂ ಹೋಗದಂತೆ ನಿಗಾ ವಹಿಸಲಾಗಿದೆ, ಹೀಗಾಗಿ ಬಿಜೆಪಿ ಶಾಸಕರನ್ನು ಬೆಂಗಳೂರು ಹೊರವಲಯದ ರಮಣಶ್ರೀ ರಾಯಲ್ ಆರ್ಕೇಡ್ ಗೆ ಶಿಫ್ಟ್ ಮಾಡಲಾಗುವುದು ಎಂಬ ವಿಷಯ ಕೇಳಿ ಬಂದಿದೆ.