ಶಾಸಕರ ರಾಜೀನಾಮೆ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರ ರಾಜೀನಾಮೆ ಹಾಗೂ ಅನರ್ಹತೆ ಕುರಿತು ಸ್ಪೀಕರ್ ನಿರ್ಧಾರ ಕೈಗೊಳ್ಳಲಿದ್ದಾರೆ. ಎಂಟಿಬಿ ನಾಗರಾಜ್, ಸುಧಾಕರ್ ಮುಂಬೈ ಗೆ ಹೋಗಿಲ್ಲ, 10 ಜನ ಶಾಸಕರಷ್ಟೇ ಮುಂಬೈ ಗೆ ಹೋಗಿದ್ದಾರೆ. ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಜೊತೆ ಮಾತನಾಡುತ್ತಿದ್ದೇವೆ ರೋಷನ್ ಬೇಗ್ ನ್ನು ಹೊರತುಪಡಿಸಿ ಉಳಿದ ಎಲ್ಲರೊಂದಿಗೂ ಮಾತನಾಡುತ್ತೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.