ಸತ್ತರೂ ನಾವು ಜೆಡಿಎಸ್ ಜೊತೆ ಹೋಗುವುದಿಲ್ಲ: ಯಡಿಯೂರಪ್ಪ

ಜೆಡಿಎಸ್ ಜೊತೆ ಸರ್ಕಾರ ಮಾಡಿ ಸಾಕಾಗಿ ಹೋಗಿದೆ. ಹೀಗಾಗಿ ಮತ್ತೆ ಅವರ ಜೊತೆ ಸರ್ಕಾರ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ
ಬೆಂಗಳೂರು: ಜೆಡಿಎಸ್ ಜೊತೆ ಸರ್ಕಾರ ಮಾಡಿ ಸಾಕಾಗಿ ಹೋಗಿದೆ. ಹೀಗಾಗಿ ಮತ್ತೆ ಅವರ ಜೊತೆ ಸರ್ಕಾರ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಸುಳ್ಳುಸುದ್ದಿ ಹಬ್ಬಿಸುವಲ್ಲಿ ಕುಮಾರಸ್ವಾಮಿ ನಿಸ್ಸೀಮರು, ಜೆಡಿಎಸ್ ಜೊತೆ ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.ಸಚಿವ ಸಾ.ರಾ ಮಹೇಶ್  ಜೊತೆಗಿನ ಭೇಟಿ ಕಾಕತಾಳೀಯ ಅದಕ್ಕೆ ಬೇರೆ ಅರ್ಥ ಕಲ್ಪಿಸುವ  ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಹೆದರಿಸಲು ಈ ರೀತಿಯ ಕಥೆ ಕಟ್ಟುತ್ತಿದ್ದಾರೆ, ಈ ಹಿಂದೆ 20-20 ಸರ್ಕಾರ ರಚಿಸಿದಾಗ ಅವರ ಆಟ ನೋಡಿದ್ದೇವೆ, ಯಾವುದೇ ಕಾರಣಕ್ಕೂ ಮತ್ತೆ ಜೆಡಿಎಸ್ ಜೊತೆ ಸರ್ಕಾರ ಸರ್ಕಾರ ರಚಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com