ವಿಶ್ವಾಸಮತಯಾಚಿಸುವ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ: ಯಡಿಯೂರಪ್ಪ
: ಮೈತ್ರಿ ಸರ್ಕಾರ ಪತನ ನಿಶ್ಚಿತ, ಆದರೂ ವಿಶ್ವಾತಮತ ಯಾಚಿಸುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ
ಬೆಂಗಳೂರು: ಮೈತ್ರಿ ಸರ್ಕಾರ ಪತನ ನಿಶ್ಚಿತ, ಆದರೂ ವಿಶ್ವಾತಮತ ಯಾಚಿಸುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ
ಮೈತ್ರಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ, ಹೀಗಾಗಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವ ಪ್ರಯತ್ನ ಮಾಡಿದ್ದಾರೆ, ಇದಕ್ಕೆ ನಮ್ಮ ಆಕ್ಷೇಪವಿಲ್ಲ, ಮೈತ್ರಿ ಸರ್ಕಾರ ಕೆಲವೇ ದಿನಗಳಲ್ಲಿ ಬೀಳಲಿದೆ ಎಂದು ಬೆಂಗಳೂರಿನಲ್ಲಿಂದು ಹೇಳಿದ್ದಾರೆ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಬಹುಮತವಿಲ್ಲ. ಇಂತಹ ವೇಳೆ ಅವರು ವಿಶ್ವಾಸಮತಯಾಚಿಸುವುದರಲ್ಲಿ ಅರ್ಥವೆ ಇಲ್ಲ. ಇಡೀ ವಾತಾವರಣ ನಮಗೆ ಅನುಕೂಲಕರವಾಗಿದೆ. ಆದರೂ ಕುಮಾರಸ್ವಾಮಿ ಧೈರ್ಯ ಮಾಡಿ ವಿಶ್ವಾಸಮತಯಾಚಿಸುವುದಾಗಿ ಹೇಳಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ