ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಂತೆ ದಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಇದಕ್ಕೆ ಪ್ರತಿಷ್ಠೆ ಅಥವಾ ಸಂಘರ್ಷ ಕಾರಣವಲ್ಲ, ಅದು ದುರಾಸೆಯಿಂದ ನಡೆಯುತ್ತಿದೆ. ಜೆಡಿಎಸ್ ನಿಂದ ರಾಜೀನಾಮೆ ನೀಡಿರುವ ಹೆಚ್ ವಿಶ್ವನಾಥ್ ಹಾಗೂ ಕೆ ಸುಧಾಕರ್ ಅವರಿಗೆ ಹೆಚ್ಚು ಹಣ ಮಾಡಬೇಕೆಂಬ ದುರಾಸೆಯಿದೆ. ಕೊನೆಯ ಉಸಿರು ಇರುವವರೆಗೂ ಗೌರವಯುತ ಶಾಸಕನಾಗಿರಲು ಇಷ್ಟ ಪಡುತ್ತೇನೆ. ಅನೇಕ ಶಾಸಕರು ಶಾಪಿಂಗ್ ಶಾಸಕರಾಗಿದ್ದಾರೆ ಎಂದರು.