ಜೊತೆಗೆ ಸಚಿವ ಎಚ್ ಡಿ ರೇವಣ್ಣ ಅವರೂ ಸಹ ಸರ್ಕಾರ ರಕ್ಷಿಸುವಂತೆ ಹಾಗೂ ಕುಮಾರಸ್ವಾಮಿ ಅವರ ಮೇಷರಾಶಿ ಮೇಲೆ ಪ್ರಭಾವ ಬೀರಿ ಸ್ಥಾನ ಕಳೆದುಕೊಳ್ಳದಂತೆ ಉಳಿಸಲು ಶಕ್ತಿ ದೇವತೆಗಳ ಮೊರೆ ಹೋಗಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ, ಶೃಂಗೇರಿ ಶಾರದೆ, ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾ ಪರಮೇಶ್ವರಿ, ಸೌತಡ್ಕ ಗಣಪತಿ, ಧರ್ಮಸ್ಥಳ ಮಂಜುನಾಥ ಸ್ವಾಮಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಬರಿಗಾಲಲ್ಲಿ ತೆರಳಿ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.