ಬುಧವಾರ ವಿಶ್ವಾಸಮತ ಯಾಚಿಸುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಹಿಂದೆ ಘೋಷಣೆ ಮಾಡಿದ್ದರು. ಆದರೆ, ಕಾಂಗ್ರೆಸ್ ಶಾಸಕರಾದ ಎಂಟಿಬಿ ನಾಗರಾಜ್ ಹಾಗೂ ಮುನಿರತ್ನ ಕೂಡಾ ಮುಂಬೈ ಸೇರಿದ್ದು, ಅತೃಪ್ತ ಗುಂಪಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲ ಪಾಳಯದಲ್ಲಿ ಹೊಸ ಹುರುಪು ಕಂಡುಬಂದಿದ್ದು, ಮುಖ್ಯಮಂತ್ರಿಗಳ ವಿಶ್ವಾಸಮತಯಾಚನೆಗೆ ಪಟ್ಟು ಹಿಡಿದಿದೆ.