ಭಾನುವಾರ ರಾಮಲಿಂಗಾರೆಡ್ಡಿ ಅವರು ತಂಗಿದ್ದ ಆನೇಕಲ್ ಬಳಿಯ ಫಾರ್ಮ್ ಹೌಸ್ಗೆ ತೆರಳಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ,ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದ ನಿಯೋಗ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವ ಪ್ರಯತ್ನ ನಡೆಸಿತ್ತು. ಆದರೆ ರಾಮಲಿಂಗಾರೆಡ್ಡಿ ಯಾವುದೇ ನಿಲುವು ಬದಲಿಸದೆ ನಿಯೋಗಕ್ಕೆ ನಿರಾಸೆ ಮೂಡಿಸಿದ್ದರು.