ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನು ತಮಗೆ ಕೊಟ್ಟಿದ್ದು, ಅದನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಈಗ ಮಂತ್ರಿ ಕೆಲಸವೇ ಸಾಕಾಗಿ ಹೋಗಿರುವಾಗ ಅತೃಪ್ತ ಶಾಸಕರನ್ನು ತಾವು ಮನವೊಲಿಸುವ ಪ್ರಯತ್ನ ಮಾಡುವುದು ಎಲ್ಲಿಂದ ಬಂತು. ಅವರನ್ನು ವಾಪಸು ಕರೆತರುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದೇವೆ ಎಂದರು.