ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರು ಕಲಾಪಕ್ಕೆ ಹೋಗಬಹುದು ಬಿಡಬಹುದು. ಆದರೆ, ಪಕ್ಷದ ಕೈಯಲ್ಲಿ ವಿಪ್ ಇದೆಯಲ್ಲ. ಅನರ್ಹತೆಯೇ ಬೇರೆಯ ಕಾನೂನಾಗಿದ್ದು, ನಾನು ನನ್ನ ಶಾಸಕರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಅವರನ್ನು ನಾನು ರೆಬೆಲ್ ಶಾಸಕರು ಎಂದು ಒಪ್ಪಿಕೊಳ್ಳುವುದಿಲ್ಲ, ಅವರು ನನ್ನ ಸ್ನೇಹಿತರು ಎಂದು ಹೇಳಿದ್ದಾರೆ.