ಪ್ರಸ್ತುತ ಕಾಂಗ್ರೆಸ್ -ಜೆಡಿಎಸ್ ಮೈತ್ರಿಕೂಟದಲ್ಲಿ 101 ಶಾಸಕರಿದ್ದಾರೆ. ರಾಮಲಿಂಗಾ ರೆಡ್ಡಿ ಸರ್ಕಾರದ ಪರ ಮತ ಚಲಾಯಿಸಿದರೆ ಅವರ ಸಂಖ್ಯೆ 102 ಆಗುತ್ತದೆ. ಇದೀಗ ಸರ್ಕಾರ ಉಳಿಸಲು ಅವರಿಗಿರುವ ಮಾರ್ಗ ಒಂದೇ ಅದು ನಮ್ಮ ಶಾಸಕರನ್ನು ಸೆಳೆದುಕೊಳ್ಳುವುದು, ಅದಕ್ಕಾಗಿ ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಈ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ಯಾರು ಬೆಂಬಲ ನೀಡುತ್ತಾರೆ, ಈ ಸರ್ಕಾರ ಕೊನೆಗೆ ದಿನಗಳನ್ನು ಎಣಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದರು.