ಇದೇ ವೇಳೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಸದನದ ಶಾಸಕರ ಸಂಖ್ಯೆ ಗಮನಿಸಿ ಕೆಲವರಿಗೆ ಮಾತ್ರ ಮಾತನಾಡಲು ಅವಕಾಶ ಕೊಡಿ, ಒಂದೇ ದಿನದಲ್ಲಿ ಚರ್ಚೆ ಮುಗಿಸಿದ ನಿದರ್ಶನಗಳು ನಮ್ಮ ಮುಂದೆ ಇವೆ. ಬೇಗನೇ ನಿರ್ಣಯವನ್ನು ಮತಕ್ಕೆ ಹಾಕಿ ಎಂದು ಬೇಡಿಕೆ ಮಂಡಿಸಿದರು. ಮಾತು ಮುಂದುವರಿಸಿದ ಕುಮಾರಸ್ವಾಮಿ, ರಾಜ್ಯ ಸರ್ಕಾರ ಲೂಟಿ ಸರ್ಕಾರವಲ್ಲ, ಬರಗಾಲ, ಕೊಡಗಿನ ನೆರೆಯಂಥ ಸಂದರ್ಭಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ ಎಂದು ಸರ್ಕಾರದ ಕೆಲಸಗಳನ್ನು ವಿವರಿಸಿದರು.