ಈಗಾಗಲೇ ಅತೃಪ್ತ ಶಾಸಕರು ತಮ್ಮ ನಿಲುವು ಸ್ಪಷ್ಟಪಡಿಸಿದ್ದು, ರಾಜಿನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ, ರೆಸಾರ್ಟ್ ನಿಂದ ತಾವು ಬೆಂಗಳೂರಿಗೆ ವಾಪಸ್ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳುವ ಸವಾಲು ಹೊತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಗುರುವಾರ ವಿಶ್ವಾಸಮತ ಯಾಚಿಸಲಿದ್ದಾರೆ. ಕುರ್ಚಿ ಉಳಿಸಿಕೊಳ್ಳುವಷ್ಟು ಶಾಸಕರ ಸಂಖ್ಯೆ ಇಲ್ಲದಿದ್ದರೂ, ಈ ಪ್ರಕ್ರಿಯೆಯಲ್ಲಿ ಸಿಗುವ ಒಂದೆರಡು ದಿನಗಳ ಕಾಲಾವಕಾಶ ಬಳಸಿ ಸಿಕ್ಕ ಅವಕಾಶ ಕಾಯ್ದಿಟ್ಟುಕೊಳ್ಳಲು ಭಗೀರಥ ಪ್ರಯತ್ನವನ್ನಂತೂ ಮಾಡಲಿದ್ದಾರೆ.