ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಸಂಬಂಧ ಇಂದು ನಡೆದ ಕಲಾಪ ಇನ್ನಿಲ್ಲದಂತಾ ಸನ್ನಿವೇಶಗಳಿಗೆ ಎಡೆ ಮಾಡಿಕೊಟ್ಟಿದೆ. ಇದರಿಂದ ಬೇಸರಗೊಂಡು ಟ್ವೀಟ್ ಮಾಡಿರುವ ಉತ್ತಮ ಪ್ರಜಾಕೀಯ ಪಕ್ಷ(ಯುಪಿಪಿ)ದ ಸಂಸ್ಥಾಪಕ ಉಪೇಂದ್ರ ಅವರು 'ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಮತ ಚಲಾಯಿಸುವ ಒಂದು ದಿನ ಮಾತ್ರ ನಮಗೆ ಬೆಲೆ ಇರುತ್ತದೆ. ಆನಂತರ ನಾವು ಮೂಕ ಪ್ರೇಕ್ಷಕರು!!!! ನಾಯಕರಿಂದ ಪ್ರಜೆಗಳಿಗೆ ಸಂಪೂರ್ಣ ಅಧಿಕಾರ ಹಸ್ತಾಂತರ ಮಾಡಲು ಬಹುಮತ ಬೇಕು ಅದಕ್ಕೆ ಪ್ರಜೆಗಳೇ ಪ್ರಜಾಕೀಯ ಪಕ್ಷಕ್ಕೆ ಸ್ಪರ್ಧಿ ಹಾಗೂ ಕಾರ್ಯಕರ್ತರಾಗಬೇಕು!! (ಮತ್ತೊಬ್ಬ ನಾಯಕ ಮಾಡಲಿ ಎಂದು ನಾವು ಕಾಯಬಾರದು)' ಬರೆದುಕೊಂಡಿದ್ದಾರೆ.