ಐಎಂಎ ಪ್ರಕರಣ, ಜಿಂದಾಲ್ ಪ್ರಕರಣದ ಬಗ್ಗೆಯೂ ನಾನು ಸತ್ಯವನ್ನು ಜನರ ಮುಂದೆ ಇಡಬೇಕಾಗಿದೆ. ಬರಗಾಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕು ಹೀಗಾಗಿ ಚರ್ಚೆ ನಡೆಸಲು ಸಮಯಾವಕಾಶ ನೀಡಬೇಕು. ಇಂದಿನ ರಾಜಕೀಯ ಪರಿಸ್ಥಿತಿ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ. ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗದಂತೆ ನಾವು ಕಲಾಪದಲ್ಲಿ ಚರ್ಚೆ ನಡೆಸಬೇಕಾಗಿದೆ ಎಂದು ಸದನದಲ್ಲಿ ಕೋರಿದ್ದಾರೆ.