ವಿಧಾನಸಭೆಯ ಕಲಾಪವನ್ನು ಸ್ಪೀಕರ್ ಅವರು ಸೋಮವಾರಕ್ಕೆ ಮುಂದೂಡಿದ ಬಳಿಕ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಬಹುಮತ ಇಲ್ಲದಿದ್ದರೂ ಕಾಲಹರಣ ಮಾಡಲಾಗಿದೆ. ಆದಷ್ಟು ಬೇಗ ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವಂತೆ ಸ್ಪೀಕರ್ಗೂ ಪತ್ರ ಬರೆದಿದ್ದೇವೆ, ರಾಜ್ಯಪಾಲರಿಗೂ ಪತ್ರ ಬರೆದು ತಿಳಿಸಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.