ರಾಮಲಿಂಗಾ ರೆಡ್ಡಿ ನಿರ್ಧಾರ ನಮಗೆ ಆಘಾತ ತಂದಿದೆ: ಎಂಟಿಬಿ ನಾಗರಾಜ್

ತಮ್ಮ ರಾಜಿನಾಮೆ ವಾಪಸ್ ಪಡೆಯುವುದಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನಮ್ಮ 13 ಶಾಸಕರಿಗೂ ಆಘಾತ ತಂದಿದೆ ಎಂದು ಕಾಂಗ್ರೆಸ್ ಅತೃಪ್ತ ಶಾಸಕ ...
ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
ಮುಂಬಯಿ: ತಮ್ಮ ರಾಜಿನಾಮೆ ವಾಪಸ್ ಪಡೆಯುವುದಾಗಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನಮ್ಮ 13 ಶಾಸಕರಿಗೂ ಆಘಾತ ತಂದಿದೆ ಎಂದು ಕಾಂಗ್ರೆಸ್ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಮುಂಬಯಿಯಿಂದ ವಿಡಿಯೋ ಸಂದೇಶ ರವಾನಿಸಿರುವ ಶಾಸಕ ಎಂಟಿಬಿ ನಾಗರಾಜ್, ರಾಮಲಿಂಗಾ ರೆಡ್ಡಿ ಹೇಳಿಕೆ ನಿಜವಾಗಿಯೂ ಆಘಾತ ತಂದಿದೆ, ಶಾಸಕರಾದ ಸೋಮಶೇಖರ್, ಭೈರತಿ ಬಸವರಾಜ್ ಹಾಗೂ ಮುನಿರತ್ನ ಅವರುಗಳ ಜೊತೆ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ಸೇರಿ ಹಲವು ಬಾರಿ ಚರ್ಚಿಸಿ ರಾಜಿನಾಮೆ ನಿರ್ಧಾರ ಕೈಗೊಂಡಿದ್ದರು.
ಹಿರಿಯ ಮುಖಂಡರಾಗಿರುವ ರಾಮಲಿಂಗಾ ರೆಡ್ಡಿ ರಾಜಿನಾಮೆ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಆದರೆ ಅವರು ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಎಲ್ಲರಿಗೂ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com