ಸದನದಲ್ಲಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭಾಷಣದ ನಂತರ ಆಡಳಿತ ಪಕ್ಷದ ನಾಯಕರು ವಿಪಕ್ಷ ನಾಯಕರ ವಿರುದ್ಧ ಶಾಸಕರಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿರುವ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಗದ್ದಲ ಉಂಟಾಯಿತು. ಜನಪ್ರತಿನಿಧಿಗಳ ವರ್ತನೆಗೆ ಅಸಮಾಧಾನಗೊಂಡ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದಂತೆ ಆಡಳಿತ-ವಿಪಕ್ಷಗಳಿಗೆ ಚಾಟಿ ಬೀಸಿದರು. ನಿಮ್ಮ ಹೊಲಸು ವ್ಯಾಪಾರ ಸ್ವಾರ್ಥಕ್ಕಾಗಿ, ಗೌರವವಾಗಿ ಬದುಕುತ್ತಿರುವವರನ್ನು ಸಾಯಿಸುತ್ತಿದ್ದೀರಿ ಎಂದು ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.