ನಿನ್ನೆ ವಿಧಾನಸಭೆಯಲ್ಲಿ ನಡೆದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಧ್ಯಪ್ರವೇಶ ಮಾಡಿದ್ದು, ಇಂದು ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚಿಸಿದ್ದರು. ಆದರೆ ರಾಜ್ಯಪಾಲರು ನೀಡಿದ ಗಡುವು ಮೀರಿದರೂ ವಿಶ್ವಾಸಮತ ಸಾಬೀತಪಡಿಸದ ಸಿಎಂ ಕುಮಾರಸ್ವಾಮಿ ಅವರಿಗೆ ಇಂದು ರಾಜ್ಯಪಾಲರು ಮರುಜ್ಞಾಪನ ಪತ್ರ ರವಾನಿಸಿದ್ದು, ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸೂಚನೆ ನೀಡಿದ್ದಾರೆ.