ರಾಜೀನಾಮೆ ನೀಡಿರುವ ಶಾಸಕರನ್ನು ಭೇಟಿಯಾಗಲು ಮುಂಬೈಗೆ ಹೋಗಿದ್ದಾಗ ಅವರನ್ನು ಬಂಧನದಲ್ಲಿಡಲಾಗಿತ್ತು ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸ್ಪೀಕರ್ ಗಮನಕ್ಕೆ ತಂದರು.ಇಂದು ಹೆಚ್ಚಿನ ಪ್ರಮಾಣದಲ್ಲಿ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ನಡೆದಿದ್ದು, ಈ ಪ್ರಕ್ರಿಯೆಯನ್ನು ಇಂದು ಅಂತ್ಯಗೊಳಿಸುವುದಾಗಿ ರಮೇಶ್ ಕುಮಾರ್ ತಿಳಿಸಿದರು.