ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಬರಗಾಲವಿದೆ. ಬಹುಮತ ಇಲ್ಲದ ಸರ್ಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಚರ್ಚೆ ಬದಲು ಕಾಲಹರಣ ಮಾಡುತ್ತಿದೆ, ಈಗ ಕುಮಾರಸ್ವಾಮಿ ವಿಶ್ವಾಸಮತ ನಿರ್ಣಯಕ್ಕೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದು, ರಾಜ್ಯಪಾಲರ ನಿರ್ದೇಶವನ್ನು ಧಿಕ್ಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಥವಾ ವಿಶ್ವಾಸಮತ ಯಾಚನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.