ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರು ದುರುದ್ದೇಶದಿಂದ ಬಿಜೆಪಿ ನಾಯಕರು 5 ಕೋಟಿ ರೂಪಾಯಿ ನೀಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಆರೋಪ ಶುದ್ಧ ಸುಳ್ಳು. ಅವರು ಅಷ್ಟೊಂದು ಹಣವನ್ನು ಸ್ವೀಕರಿಸಿದ್ದು, ಇಟ್ಟುಕೊಂಡಿದ್ದು ತಪ್ಪು. ಈ ಹಿನ್ನೆಲೆಯಲ್ಲಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡನೆಗೆ ಅವಕಾಶ ಕೇಳಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.