ಎಂಟಿಬಿ ನಾಗರಾಜ್ ಹೇಳಿಕೆಗೂ ನನಗೂ ಸಂಬಂಧವಿಲ್ಲ. ನಾನು ನಾಗರಾಜ್ ಅವರನ್ನು ಭೇಟಿಯಾಗಿಲ್ಲ. ಎಚ್. ವಿಶ್ವನಾಥ್ ಅವರನ್ನು ಒಂದು ಬಾರಿ ಭೇಟಿಯಾಗಿದ್ದೆ ಎಂದು ಸ್ಪಷ್ಟಪಡಿಸಿದ ರಾಮಲಿಂಗಾ ರೆಡ್ಡಿ, ನನಗೆ ಡಿಸಿಎಂ ಹುದ್ದೆ ಬೇಕಾಗಿಲ್ಲ. ಕಾಂಗ್ರೆಸ್, ಬಿಜೆಪಿಯಲ್ಲಿ ಅನೇಕ ಜನ ಡಿಸಿಎಂ ಆಗಬೇಕು ಎಂಬ ಆಸೆ ಇಟ್ಟುಕೊಂಡವರಿದ್ದಾರೆ. ಆದರೆ ನನಗೆ ಈ ರೀತಿಯ ಯಾವುದೇ ಆಸೆ ಇಲ್ಲ. ಡಿಸಿಎಂ ಹುದ್ದೆ ಕೊಟ್ಟರೂ ನನಗೆ ಬೇಡ ಎಂದು ಹೇಳಿದರು.