ಶನಿವಾರ ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನಾವು ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕುವುದನ್ನು ವಿಳಂಬ ಮಾಡಿಲ್ಲ. ಸಂಸದೀಯ ನಡವಳಿಕೆಯಲ್ಲಿ ಕೆಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವುದು ನಮ್ಮ ಹಕ್ಕು. ಸೋಮವಾರ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.