ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಎಚ್. ಡಿ. ದೇವೇಗೌಡರ ಕುಟುಂಬ ಹಲವು ಬಾರಿ ಶೃಂಗೇರಿ ದೇಗುಲಕ್ಕೆ ಭೇಟಿ ಕೊಟ್ಟಿದೆ. ಹಲವು ಹೋಮ, ವಿಶೇಷ ಪೂಜೆಗಳನ್ನು ಸಲ್ಲಿಸಿದೆ. ಸೋಮವಾರ ಮಹತ್ವದ ದಿನವಾದ ಕಾರಣ ಭಾನುವಾರ ವಿಶೇಷ ಪೂಜೆ ಮಾಡಿಸಲಾಗಿದೆ. ಗುರುವಾರ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತದ ಮೇಲಿನ ಚರ್ಚೆಯನ್ನು ಆರಂಭಿಸಲಾಗಿದೆ. ಸೋಮವಾರ ಈ ಚರ್ಚೆ ಪೂರ್ಣಗೊಳ್ಳಲಿದ್ದು, ಮತದಾನ ನಡೆಯಲಿದೆ.