'ಅಧಿಕಾರಕ್ಕೆ ಅಂಟಿ ಕುಳಿತಿಲ್ಲ ಎಂದು ಹೇಳುತ್ತಿರುವ ಎಚ್ ಡಿಕೆ, ಸಿಎಂ ಕುರ್ಚಿಗೆ ಗೂಟ ಹೊಡೆದುಕೊಂಡು ಕೂತಿದ್ದಾರೆ'

ನಾವು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಧಿವೇಶನದಲ್ಲಿ ಹೇಳುತ್ತಾರೆ, ಆದರೆ ಅವರು ವಿಶ್ವಾಸಮತ ಯಾಚನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ನಾವು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಧಿವೇಶನದಲ್ಲಿ ಹೇಳುತ್ತಾರೆ, ಆದರೆ ಅವರು ವಿಶ್ವಾಸಮತ ಯಾಚನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ಸ್ಪೀಕರ್, ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಇದಕ್ಕೆ ಒಪ್ಪಿದ್ದಾರೆ. ಆದರೆ ಒಂದು ವೇಳೆ ನಾಳೆ ಚರ್ಚೆ ಮುಂದೂಡಿದರೆ ಅವರೆಲ್ಲರೂ ವಚನಭ್ರಷ್ಟರಾಗುತ್ತಾರೆ. ನಮ್ಮನ್ನು ಪ್ರಚೋದಿಸುವುದೇ ಮೈತ್ರಿ ಸರ್ಕಾರದ ಉದ್ದೇಶ. ಆದರೆ ನಾವು ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಅಧಿಕಾರಕ್ಕೆ ಅಂಟಿ ಕುಳಿತಿಲ್ಲ. ನಮ್ಮ ಕುಟುಂಬಕ್ಕೆ ಅಧಿಕಾರದ ಆಸೆ ಇಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ, ಇನ್ನೂ ಗೂಟ ಹಾಕಿಕೊಂಡು ಅಧಿಕಾರದಲ್ಲೇ ಮುಂದುವರಿಯುತ್ತಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com