ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಿರ್ಣಯದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ಸ್ಪೀಕರ್, ಮುಖ್ಯಮಂತ್ರಿ ಹಾಗೂ ಸಿದ್ದರಾಮಯ್ಯ ಅವರು ಇದಕ್ಕೆ ಒಪ್ಪಿದ್ದಾರೆ. ಆದರೆ ಒಂದು ವೇಳೆ ನಾಳೆ ಚರ್ಚೆ ಮುಂದೂಡಿದರೆ ಅವರೆಲ್ಲರೂ ವಚನಭ್ರಷ್ಟರಾಗುತ್ತಾರೆ. ನಮ್ಮನ್ನು ಪ್ರಚೋದಿಸುವುದೇ ಮೈತ್ರಿ ಸರ್ಕಾರದ ಉದ್ದೇಶ. ಆದರೆ ನಾವು ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.