ಕಾಂಗ್ರೆಸ್ ಬಂಡಾಯ ಶಾಸಕರನ್ನು ಬಿಜೆಪಿಯವರೇ ಮುಂಬೈಗೆ ಕಳುಹಿಸಿರುವ ಬಗ್ಗೆ ನಮ್ಮಲ್ಲಿ ಸೂಕ್ತ ದಾಖಲೆಗಳಿವೆ. ಪೋಟೋಗಳು, ಪ್ರಯಾಣದ ವೆಚ್ಚದ ಮಾಹಿತಿ ಎಲ್ಲವೂ ನಮ್ಮ ಬಳಿ ಇದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಈ ಎಲ್ಲಾ ಅಸ್ಥಿರತೆಗೆ ಬಿಜೆಪಿಯೇ ನೇರ ಕಾರಣ ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.