ಪಕ್ಷೇತರರು ಅಡ್ವೋಕೇಟ್ ದೀಕ್ಷಾ ರೈ ಎನ್ನುವವರ ಮೂಲಕ ಸುಪ್ರೀಂಗೆ ಮನವಿ ಸಲ್ಲಿಸಿದ್ದು ರಾಜ್ಯದಲ್ಲಿ ಉಂಟಾಗಿರುವ ಸಾಂವಿಧಾನಿಕ ಬಿಕ್ಕಟ್ಟಿಗೆ ಅಂತ್ಯ ಹಾಡಬೇಕೆಂಬ ಉದ್ದೇಶದಿಂದ ಈ ಅರ್ಜಿ ಸಲ್ಲಿಕೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಸೋಮವಾರ ಸಂಜೆಯೊಳಗೆ ಬಹುಮತವಿಲ್ಲದ ಎಚ್.ಡಿ.. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ತಾವು ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಬೇಕು. ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಅವರು ಕೇಳಿದ್ದಾರೆ.
ಸೋಮವಾರ ಸಂಜೆ ಐದು ಗಂಟೆಯೊಳಗಾಗಿ ಸ್ಪೀಕರ್ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಲು ಅರ್ಜಿದಾರರು ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿದ್ದ ಇಬ್ಬರು ಪಕ್ಷೇತರಶಾಸಕರಾದ ನಾಗೇಶ್ ಹಾಗೂ ಶಂಕರ್ ಅವರುಗಳು ಅತೃಪ್ತರ ರಾಜೀನಾಮೆ ಪರ್ವ ಪ್ರಾರಂಭವಾಗುತ್ತಲೇ ಸರ್ಕಾರಕ್ಕೆ ತಮ್ಮ ಬೆಂಬಲ ಹಿಂಪಡೆದಿದ್ದರು.