ಮೈತ್ರಿ ಈಗ ಸರ್ಕಾರ ರಕ್ಷಣೆಗಾಗಿ ಪ್ರತಿಯೊಬ್ಬ ಶಾಸಕರನ್ನು ಕಾಡಿ ಬೇಡಿ ಉಳಿಸಿಕೊಳ್ಳುತ್ತಿರುವ ನಾಯಕರು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರನ್ನು ಮರೆತಿರುವಂತೆ ಕಾಣುತ್ತಿದೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಇದುವರೆಗೂ ಮಾಯವತಿ ಜತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಾಗಲೀ, ಮಾಜಿ ಪ್ರಧಾನಿ ದೇವೇಗೌಡರಾಗಲಿ ಚರ್ಚೆ ನಡೆಸಿಲ್ಲ ಎನ್ನಲಾಗಿದೆ.