ವಿಶ್ವಾಸಮತ ನಿರ್ಣಯದ ಮೇಲೆ ನಡೆದ ಮುಂದುವರಿದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವಾಸಮತ ಒಂದೇ ಇಲ್ಲಿನ ಚರ್ಚೆ ಎಂಬಂತೆ ವಿರೋಧ ಪಕ್ಷದವರೂ, ಮಾಧ್ಯಮದವರು ಬಿಂಬಿಸುತ್ತಿದ್ದಾರೆ. ಆದರೆ ಕೆಲವು ಶಾಸಕರು ಏಕೆ ರಾಜೀನಾಮೆ ನೀಡಿದ್ದಾರೆ ಎಂಬುದರ ಬಗ್ಗೆಯೂ ಚರ್ಚೆಯಾಗಲಿ, ಈ ಬಗ್ಗೆ ಸದನ ಬೆಳಕು ಚೆಲ್ಲಲಿ, ನಿಮಗೆ ವಿಶ್ವಾಸಮತ ಯಾಚನೆ ಬಗ್ಗೆ ಅವಸರವಿರಬಹುದು, ಆದರೆ ನಮಗೆ ಈ ಎಲ್ಲಾ ವಿಷಯಗಳು ಬೆಳಕಿಗೆ ಬರಬೇಕು ಎಂಬ ಉದ್ದೇಶವಿದೆ ಎಂದು ಹೇಳಿದರು.