'ಆಪರೇಷನ್ ಕಮಲ'ದ ಸತ್ಯವನ್ನು ಬಿಜೆಪಿ ಒಪ್ಪಿಕೊಳ್ಳಲಿ: ಡಿಕೆ ಶಿವಕುಮಾರ್

ಆಪರೇಷನ್ ಕಮಲದ ಹಿಂದಿರುವ ಸತ್ಯವನ್ನು ಏಕೆ ಬಿಜೆಪಿ ಒಪ್ಪಿಕೊಳ್ಳುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಬೆಂಗಳೂರು: ಆಪರೇಷನ್ ಕಮಲದ ಹಿಂದಿರುವ ಸತ್ಯವನ್ನು ಏಕೆ ಬಿಜೆಪಿ ಒಪ್ಪಿಕೊಳ್ಳುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಜೊತೆಗೆ ಬಿಜೆಪಿ ಸಂಪರ್ಕದಲ್ಲಿದೆ. ಅವರಿಗೆ ಅಧಿಕಾರ ಬೇಕಾಗಿದೆ. ಆದ್ದರಿಂದ ಆಪರೇಷನ್ ಕಮಲ ನಡೆಸುತ್ತಿದ್ದೆ . ಇದನ್ನು ಬಿಜೆಪಿಯವರು ಒಪ್ಪಿಕೊಳ್ಳಲಿ ಎಂದು ಡಿಕೆಶಿವಕುಮಾರ್ ಹೇಳಿದರು.
ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಇಂದು ಪೂರ್ಣಗೊಳಿಸುವಂತೆ ಪಕ್ಷೇತರ ಶಾಸಕರು ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ತುರ್ತು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಡಿಕೆ ಶಿವಕುಮಾರ್ ಈ ರೀತಿ ಹೇಳಿದರು.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯಪಾಲರನ್ನು ಬಳಸಿಕೊಳ್ಳುವ ಮೂಲಕ ಅಧಿಕಾರ ಹಿಡಿಯಲು ಬಿಜೆಪಿ ಅತುರಪಡುತ್ತಿದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com