ಬೆಂಗಳೂರು: ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಮೈತ್ರಿ ಸರ್ಕಾರದ ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ನಡೆಯುತ್ತಿದ್ದು, ನಿರ್ಣಯವನ್ನು ಮತಕ್ಕೆ ಹಾಕಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಎಲ್ಲಾ ಶಾಸಕರು ಇಂದಿನ ಕಾರ್ಯಕಲಾಪಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ವಿಪ್ ನಲ್ಲಿ ಉಲ್ಲೇಖಿಸಲಾಗಿದೆ..
ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಸದನದಲ್ಲಿ ಹಾಜರಾಗುವ ಮೂಲಕ ಮೈತ್ರಿ ಸರ್ಕಾರದ ಪರವಾಗಿ ಬೆಂಬಲ ಸೂಚಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.