ಮುಂಬೈನಲ್ಲಿರುವ ಶಾಸಕರು ವಾಪಾಸ್ ಆಗಿ ವಿಶ್ವಾಸಮತ ಬೆಂಬಲಿಸುವಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮತ್ತಿತರ ಹಲವು ನಾಯಕರು ಮನವಿ ಮಾಡಿಕೊಂಡಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ವಾಪಾಸ್ ಆಗುವುದಿಲ್ಲ ಎಂದು ಬಂಡಾಯ ಶಾಸಕರು ಸ್ಪಷ್ಟಪಡಿಸಿದ್ದು, ಮೈತ್ರಿ ಸರ್ಕಾರ ಅಸ್ತಿತ್ವ ಯಕ್ಷಪ್ರಶ್ನೆಯಾಗಿದೆ.