ಬೆಂಗಳೂರು: ರಾಜ್ಯ ರಾಜಕಾರಣದ ಬಿಕ್ಕಟ್ಟು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರಂತರ ಆದೇಶದ ನಂತರವೂ, ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್ ಅವರು ಅಲ್ಪಮತಕ್ಕೆ ಕುಸಿದಿರುವ ರಾಜ್ಯ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.