ಸೋಮವಾರ ಕಲಾಪ ಆರಂಭಕ್ಕೂ ಮುನ್ನ ರಮೇಶ್ ಕುಮಾರ್ ಅವರನ್ನು ಜೆಡಿಎಸ್ ನಿಯೋಗದ ಜೊತೆ ಭೇಟಿಯಾದ ಕುಮಾರಸ್ವಾಮಿ, ಬುಧವಾರ ತಾವು ಬಹುಮತ ಸಾಬೀತುಪಡಿಸಲಿದ್ದು, ಇನ್ನೂ ಎರಡು ದಿನ ಕಾಲಾವಕಾಶ ಕೊಡುವಂತೆ ಮನವಿ ಮಾಡಿದರು. ಸಚಿವರಾದ ಕೃಷ್ಣಬೈರೇಗೌಡ, ಹೆಚ್.ಡಿ.ರೇವಣ್ಣ, ಪ್ರಿಯಾಂಕ್ ಖರ್ಗೆ ಸಹ ಸ್ಪೀಕರ್ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚಿಸಿದರು.