ಬೆಂಗಳೂರು: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ಬೆನ್ನಲ್ಲೇ ಕುಮಾರಸ್ವಾಮಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದಿಂದ ನೆರವಾಗಿ ರಾಜಭವನಕ್ಕೆ ತೆರಳಿದ ಸಿಎಂ ಕುಮಾರಸ್ವಾಮಿ ರಾಜ್ಯಪಲಾರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.
ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೊತೆಗೆ ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ ಶಿವಕುಮಾರ್, ಹೆಚ್ ಡಿ ರೇವಣ್ಣ ರಾಜಭವನಕ್ಕೆ ತೆರಳಿದ್ದರು.
ರಾಜೀನಾಮೆಗೂ ಮುನ್ನ, ಸರ್ಕಾರ ಪತನಗೊಂಡ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ ನನ್ನ ನೇತೃತ್ವದ 14 ತಿಂಗಳ ಮೈತ್ರಿ ಸರ್ಕಾರಕ್ಕೆ ಸಹಕಾರ ನೀಡಿದ್ದಕ್ಕೆ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.